ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ ಇರುವಾಗಲೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್, ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ.
ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿದ್ದು, ಈ ಕೊನೆ ಕ್ಷಣದಲ್ಲಿ ಕಾಂಗ್ರೆಸ್(Congress) ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು ಬದಲಿಸಿದೆ. ಡಾ.ಬಿಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಟಿಕೆಟ್ ನೀಡಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಿನ್ನೆ ರಾತ್ರಿ ಅಷ್ಟೇ 5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈ ಪಟ್ಟಿಯಲ್ಲಿ ಮುಳಬಾಗಿಲು ವಿಧಾನಸಭೆ ಕ್ಷೇತ್ರಕ್ಕೆ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರನ್ನು ಫೈನಲ್ ಮಾಡಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಆದ್ರೆ, ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ಮುಳಬಾಗಿಲು ಅಭ್ಯರ್ಥಿಯನ್ನು ಬದಲಿಸಿದ್ದು, ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಮಣೆ ಹಾಕಿದೆ.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ಅವರು ಮುಳಬಾಗಿಲು ಕ್ಷೇತ್ರಕ್ಕೆ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದಿನಾರಾಯಣ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದ್ರೆ, ಹೈಕಮಾಂಡ್ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರಿಗೆ ಮಣೆ ಹಾಕಿತ್ತು. ಇದರಿಂದ ಕೊತ್ತನೂರು ಮಂಜುನಾಥ್ ಸೇರಿದಂತೆ ಸ್ಥಳೀಯ ನಾಯಕರು ತೀವ್ರ ಅಸಮಾಧಾನಗೊಂಡಿದ್ದರು. ಇದರಿಂದ ಎಚ್ಚೆತ್ತ ಕಾಂಗ್ರೆಸ್ ಕೊನ್ ಕ್ಷಣದಲ್ಲಿ ಮುದ್ದು ಗಂಗಾಧರ್ ಅವರನ್ನು ಬದಲಿಸಿ ಆದಿನಾರಾಯಣ ಅವರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ನಿನ್ನೆ ಅಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧೆ ಮಾಡುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಬದಲಾವಣೆ ಮಾಡಿತ್ತು. ಈ ಹಿಂದೆ ಅಲ್ಲಿ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಘೋಷಿಸಿತ್ತು. ಆದ್ರೆ, ನಿನ್ನೆ ಯಾಸೀರ್ ಅಹ್ಮದ್ ಖಾನ್ ಪಠಾಣ್ಗೆ ಟಿಕೆಟ್ ಘೋಷಣೆ ಮಾಡಿದೆ. ಇದೀಗ ಕೋಲಾರ ಜಿಲ್ಲೆಯ ಮುಳಬಾಗಿಲ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ.
ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಮತ್ತೊಂದು ರಣತಂತ್ರ: ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂಗೌಡ ಸ್ಪರ್ಧೆ?

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿ. ಈ ಕೊನೆ ಕ್ಷಣದಲ್ಲಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಮತ್ತೊಂದು ರಣತಂತ್ರ ರೂಪಿಸಿದೆ. ಹೆಚ್ಡಿ ರೇವಣ್ಣ ಠಕ್ಕರ್ ನೀಡಲು ಬಿಜೆಪಿ ಮೆಗಾ ಪ್ಲಾನ್ ಮಾಡಿದೆ ಎಂದು ತಿಳಿದುಬಂದಿದೆ.
ಹಾಸನ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೆಲ ಅಚ್ಚರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾಗೇ ಅಚ್ಚರಕರ ಪ್ರಯೋಗಳನ್ನು ಮಾಡುತ್ತಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಹಾಗೂ ಕನಕಪುರದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರ್.ಅಶೋಕ್ ಅವರನ್ನು ಕಣಕ್ಕಿಸಿದೆ. ಇದೀಗ ಕೊನೆ ಕ್ಷಣದಲ್ಲಿ ಬಿಜೆಪಿ ಮತ್ತೊಂದು ರಣತಂತ್ರ ಹೆಣೆದಿದೆ. ಅದೇನೆಂದರೆ ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಂಗೌಡ ಅವರನ್ನು ಸ್ಪರ್ಧೆಗಿಳಿಸಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಈಗಾಗಲೇ ಪ್ರೀತಂಗೌಡ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿನ್ನೆ (ಏಪ್ರಿಲ್ 19) ನಾಮಪತ್ರ ಸಲ್ಲಿಸಿದ್ದಾರೆ. ಇಂದು ಹೊಳೆನರಸೀಪುರ ಕ್ಷೇತ್ರಕ್ಕೂ ಸಹ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವೆಂಬಂತೆ ಚುನಾವಣಾ ಪ್ರಚಾರವನ್ನು ಬೇಗ ಮುಗಿಸಿ ಹೊಳೆನರಸೀಪುರದಲ್ಲಿ ನಾಮಿನೇಷನ್ ಮಾಡಬೇಕು ಎನ್ನುವ ಮಾತುಗಳನ್ನಾಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು….ಹಾಸನದ ಗುಡ್ಡೇನಹಳ್ಳಿ ಬಡಾವಣೆಯಲ್ಲಿ ಇಂದು(ಏಪ್ರಿಲ್ 20) ಬೆಳಗ್ಗೆ ಪ್ರಚಾರದ ವೇಳೆ ಕಾರ್ಯಕರ್ತ ರ ಜೊತೆ ಮಾತನಾಡಿದ ಪ್ರೀತಂಗೌಡ, ಹೊಳೆನರಸೀಪುರದಲ್ಲಿ ನಾಮಿನೇಷನ್ ಮಾಡಬೇಕು ಹಾಗಾಗಿ ಬೇಗ ಮುಗಿಸಿ ಎನ್ನುವ ಮಾತುಗಳನ್ನಾಡಿದ್ದಾರೆ. ಅಲ್ಲದೇ ಪ್ರಚಾರ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೀತಂಗೌಡ, ನಮ್ಮ ಪಕ್ಷದ ವರಿಷ್ಠರು ರಣತಂತ್ರ ಮಾಡಿದಾರೆ. ಆ ತಂತ್ರ ಏನೆಂದು 10.30ಕ್ಕೆ(ಇಂದು ಬೆಳಗ್ಗೆ) ಹೇಳುತ್ತೇನೆ. ನಾಮಪತ್ರ ಸಲ್ಲಿಸುವುದು ಖಚಿತ. ಕಾದು ನೋಡಿ ಎಂದು ಹೇಳುವ ಮೂಲಕ ವಿಷಯವನ್ನು ನಿಗೂಢವಾಗಿ ಕಾಪಾಡಿಕೊಳ್ಳುತ್ತಲೇ ಮತ್ತಷ್ಟು ಕುತೂಹಲ ಹೆಚ್ಚಿಸಿದ್ದಾರೆ.
ಈಗಾಗಲೇ ಬಿಜೆಪಿ ಮೊದಲ ಪಟ್ಟಿಯಲ್ಲಿ ದೇವರಾಜೇಗೌಡ ಅವರ ಹೆಸರನ್ನು ಹೊಳೆನರಸೀಪುರ ಕ್ಷೇತ್ರಕ್ಕೆ ಪ್ರಕಟಿಸಿತ್ತು. ಆದ್ರೆ, ಅದೇನಾಯ್ತೋ ಏನೋ ಹಾಸನ ಜಿಲ್ಲಾ ರಾಜಕೀಯದಲ್ಲಿ ದಿಢೀರ್ ಮಹತ್ವ ರಾಜಕೀಯ ಬೆಳವಣಿಗೆ ನಡೆದಿದ್ದು, ಅಂತಿಮವಾಗಿ ರೇವಣ್ಣ ವಿರುದ್ಧ ಪ್ರತೀಂಗೌಡ ಅವರನ್ನು ಕಣಕ್ಕಿಳಿಸುವ ತಂತ್ರಗಳು ನಡೆದಿವೆ.
ಲೇಖನ : ವಿಕ್ರಮ ಎಚ್
ಪ್ರಜಾ ಟೈಮ್ಸ್
www.prajatimes.com
- ನರೇಂದ್ರ ಮೋದಿ ರೋಡ್ ಶೋ ಮಾಡಿದ ಮೋಡಿ ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಖಚಿತ: ಸಮೀಕ್ಷೆ
- ಬ್ಯಾಟರಾಯನಪುರ ಕ್ಷೇತ್ರ : ಗೆಲುವಿಗೆ ಹತ್ತಿರ ಬಂದಿರುವ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡ.
- ಕೊನೆ ಕ್ಷಣದ ಕೋಲಾಹಲ ಕನಕಪುರದಿಂದ D K ಸುರೇಶ ನಾಮಪತ್ರ,ಬಿಜೆಪಿ ಮತ್ತು ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿಗಳ ಬದಲಾವಣೆ.
- ಬ್ಯಾಟರಾಯನಪುರ ತಮ್ಮೆಶ್ ಗೌಡ ನಾಮಪತ್ರ ಸಲ್ಲಿಕೆಗೆ ಹರಿದುಬಂದ ಜನಸಾಗರ.
- ಕೈತಪ್ಪಿದ ಟಿಕೆಟ್, ಕೃಷ್ಣರಾಜ ಕ್ಷೇತ್ರ ಶಾಸಕ ರಾಮದಾಸ್ ಅಸಮಾಧಾನ.

